Vasudhendra

Vasudhendra

15 Books
0 Rating
0 Follow

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಾಡಿದ್ದಾರೆ. NITK ಸುರತ್ಕಲ್‍ನಿಂದ ಇಂಜಿನಿಯರಿಂಗ್ ಮತ್ತು IISc ಬೆಂಗಳೂರಿನಿಂದ ಎಂ.ಇ. ಪದವಿ ಪಡೆದಿದ್ದಾರೆ. 20 ವರ್ಷಗಳ ಕಾಲ ಸಾಫ್ಟ್‌ವೇರ್ ಪ್ರಪಂಚದಲ್ಲಿ ಕೆಲಸ ಮಾಡಿ, ಈಗ ತಮ್ಮ ಸಮಯವನ್ನು ಪ್ರವಾಸ, ಓದು ಮತ್ತು ಬರಹಗಳಿಗೆ ಬಳಸುತ್ತಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ದ.ರಾ. ಬೇಂದ್ರೆ ಕಥಾ ಪ್ರಶಸ್ತಿ, ಮಾಸ್ತಿ ಕಥಾ ಪುರಸ್ಕಾರ, ಡಾ. ಯು. ಆರ್. ಅನಂತಮೂರ್ತಿ ಪ್ರಶಸ್ತಿ, ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ, ವಸುದೇವ ಭೂಪಾಲಂ ದತ್ತಿನಿಧಿ ಪ್ರಶಸ್ತಿ, ವರ್ಧಮಾನ ಉದಯೋನ್ಮುಖ ಪ್ರಶಸ್ತಿ, ಸೇಡಂನ ‘ಅಮ್ಮ’ ಪ್ರಶಸ್ತಿ ಮತ್ತು ಕಥಾರಂಗಂ ಪ್ರಶಸ್ತಿಗಳನ್ನು ಪಡೆದಿದ್ದಾರೆ. ‘ಛಂದ ಪುಸ್ತಕ’ ಎಂಬ ಪ್ರಕಾಶನ ಸಂಸ್ಥೆಯನ್ನು ಪ್ರಾರಂಭಿಸಿ, ಅದರ ಮೂಲಕ ನಾಡಿನ ಹಲವು ಹೊಸ ಬರಹಗಾರರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಆ ಪುಸ್ತಕಗಳ ಜೊತೆಗೆ, ತಮ್ಮ ಪುಸ್ತಕಗಳ ಮುದ್ರಣ ಮತ್ತು ಮಾರಾಟವನ್ನು ಸ್ವತಃ ನೋಡಿಕೊಳ್ಳುತ್ತಾರೆ. ಚಾರಣದಲ್ಲಿ ವಿಶೇಷ ಆಸಕ್ತಿಯಿರುವ ಇವರು ನಮ್ಮ ಪಶ್ಚಿಮ ಘಟ್ಟದ ಕಾಡಿನಲ್ಲಿರುವ ಹಲವು ಬೆಟ್ಟಗಳನ್ನೂ, ತಾಂಜಾನಿಯಾ ದೇಶದಲ್ಲಿರುವ ಕಿಲಿಮಂಜಾರೋ ಪರ್ವತವನ್ನೂ ಮತ್ತು ಹಿಮಾಲಯದಲ್ಲಿರುವ ಹಲವಾರು ಪರ್ವತಗಳನ್ನೂ ಹತ್ತಿದ್ದಾರೆ. ಟಿಬೇಟಿನಲ್ಲಿರುವ ಕೈಲಾಶ ಮತ್ತು ಮಾನಸ ಸರೋವರದ ಚಾರಣವನ್ನು ಮಾಡಿದ್ದಾರೆ. ಸ್ಕ್ವಾಷ್ ಆಟ, ಮಹಾಭಾರತದ ಅಧ್ಯಯನ ಮತ್ತು ಶಾಸ್ತ್ರೀಯ ಸಂಗೀತವನ್ನು ಕೇಳುವುದು ಇವರ ಇತರ ಹವ್ಯಾಸಗಳು.

Vasudhendra

Vasudhendra

15 Books

Offers

Best Deal

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua

Lorem ipsum dolor sit amet, consectetur adipiscing elit, sed do eiusmod tempor incididunt ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.

whatsapp