Mithuna
(0)
₹
135
₹ 114.75 (15% off)
Available
Ships within 48 Hours
Free Shipping in India on orders above Rs. 1100
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Read moreAbout the Book
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.
Book Details
-
ISBN97882E12
-
Pages98
-
Avg Reading Time3 hrs
-
Age18+ yrs
-
Country of OriginIndia
Recommended For You
Harichitta Satya
- Author Name:
Vasudhendra
- Book Type:

- Description:
ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
Kotigalu
- Author Name:
Vasudhendra
- Book Type:

- Description:
ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
Maneeshe
- Author Name:
Vasudhendra
- Book Type:

- Description:
ವಸುಧೇಂದ್ರರ ಮೊದಲ ಕಥಾಸಂಕಲನ. ತಮ್ಮ ಬಳ್ಳಾರಿ ಜಿಲ್ಲೆಯ ಬ್ರಾಹ್ಮಣ ಕುಟುಂಬಗಳ ದಟ್ಟ ವಿವರಗಳುಳ್ಳ ಕತೆಗಳು ಇಲ್ಲಿವೆ. ವಿಶೇಷವಾಗಿ ’ಹುಲಿಗೆವ್ವ’ ಎನ್ನುವ ವಿಭಿನ್ನ ಜಾಡಿನ ಕತೆ ಈ ಸಂಕಲನದಲ್ಲಿ ಕಾಣಿಸಿಕೊಂಡಿದೆ.
Varnamaya
- Author Name:
Vasudhendra
- Book Type:

- Description:
ವಸುಧೇಂದ್ರರ ಎರಡು ನೀಳ್ ಪ್ರಬಂಧಗಳ ಜೊತೆಗೆ, ಹಲವು ಸ್ವಾರಸ್ಯಕರ ಸುಲಲಿತ ಪ್ರಬಂಧಗಳು. ಕಥೆಗಾರ, ಬರಹಗಾರರಾದ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ ’ ವರ್ಣಮಯ’. ಈ ಪ್ರಬಂಧ ಸಂಕಲನದಲ್ಲಿ ಬರುವ ನಂಜುಂಡಿ ಮತ್ತು ಗೌರಮ್ಮ ಎಂಬ ಬರಹಗಳಲ್ಲಿ ಲೇಖಕರು ತಮ್ಮ ಸುತ್ತಲಿನ ಸಮಾಜದ ಎಷ್ಟೋ ಮಜಲುಗಳನ್ನು ಕೆಳ, ಮಧ್ಯಮ ಹಾಗೂ ಮೇಲಿನ ವರ್ಗದ ಜನರುಗಳ ನಡುವೆ ಮುಖಾಮುಖಿಯಾಗಿಸುತ್ತಾ ಅವರ ನಡವಳಿಕೆಗಳನ್ನು ಹಾಸ್ಯ ಪ್ರಜ್ಷೆಯೊಂದರಲ್ಲಿಓದುಗರಿಗೆ ಪರಿಚಯಿಸಿದ್ದಾರೆ. ತಾಯಿ ದೇವರಲ್ಲ, ಅಮ್ಮ ಎನ್ನುವ ಸಂಭ್ರಮ, ಹಗ್ಗದ ಹಾವು, ಬರಹಗಳು ಲೇಖಕರ ಮನೆಯ ಅನುಭವ ಚಿತ್ರಣವನ್ನು ನೀಡುವಂತದ್ದಾಗಿದೆ.
Yugaadi
- Author Name:
Vasudhendra
- Book Type:

- Description:
ವಸುಧೇಂದ್ರರ ಈ ಕಥಾಸಂಕಲನಕ್ಕೆ ಹಲವು ಪ್ರಶಸ್ತಿಗಳು ಸಂದಿವೆ. ಮುಖ್ಯವಾಗಿ ಡಾ. ಯು ಆರ್ ಅನಂತಮೂರ್ತಿ ಪ್ರಶಸ್ತಿ ಹಾಗೂ ವರ್ಧಮಾನ ಉದಯೋನ್ಮುಖ ಪ್ರಶಸ್ತಿಗಳು ಈ ಸಂಕಲನಕ್ಕೆ ದಕ್ಕಿವೆ.
Aidu Paise VaradakshiNe
- Author Name:
Vasudhendra
- Book Type:

- Description:
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
Everest
- Author Name:
Jon Krakauers +1
- Book Type:

- Description:
ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ. ’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ. ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
kothigalu
- Author Name:
Vasudhendra
- Book Type:

- Description:
ವಸುಧೇಂದ್ರರ ಆರಂಭದ ಸುಲಲಿತ ಪ್ರಬಂಧಗಳ ಗುಚ್ಛ.
Mohanaswamy
- Author Name:
Vasudhendra
- Book Type:

- Description:
ಸಲಿಂಗಪ್ರೇಮಿ ಮೋಹನಸ್ವಾಮಿಯ ವಿಭಿನ್ನ ಮನಸ್ಥಿತಿಯ ಕತೆಗಳು ಇದರಲ್ಲಿವೆ. ಅದಲ್ಲದೆ ಇತರ ಐದು ವಸುಧೇಂದ್ರರ ಜನಪ್ರಿಯ ಕತೆಗಳೂ ಈ ಸಂಕಲನದಲ್ಲಿವೆ.
Hampi Express
- Author Name:
Vasudhendra
- Book Type:

- Description:
ಹಂಪಿ ಎಕ್ಸ್ಪ್ರೆಸ್ (ಕನ್ನಡ)-ವಸುಧೇಂದ್ರ ಅವರ ಕನ್ನಡದಲ್ಲಿ ಸಣ್ಣ ಕಥೆಗಳ ಸಂಗ್ರಹವನ್ನು ಚಂದಾ ಪುಸ್ತಕದಿಂದ ಪ್ರಕಟಿಸಲಾಗಿದೆ. ಈ ಕೃತಿಯಲ್ಲಿ ವಾಸ್ತವಕ್ಕೆ ಹತ್ತಿರವಾದ ಮತ್ತು ಸಮಕಾಲೀನ ತಲ್ಲಣಗಳನ್ನು ಎದುರಿಸುವ ಹಲವು ವಿಷಯಗಳನ್ನು ಕಥೆಗಾರ ವಸುಧೇಂದ್ರ ಓದುಗರಿಗೆ ನೀಡಿದ್ದಾರೆ. ಈ ಕೃತಿಗೆ ಮಾಸ್ತಿ ಕಥಾ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ ಮತ್ತು ವಾಸುದೇವ ಭೂಪಾಲಂ ಪ್ರಶಸ್ತಿ ಲಭಿಸಿದೆ.
Rushyashrunga
- Author Name:
Harisha Hagalawadi
- Book Type:

- Description:
ತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.
Amrapali
- Author Name:
Gayathriraj
- Book Type:

- Description:
ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
Saavu
- Author Name:
Supreeth K N
- Book Type:

- Description:
Novel based on death. ಇಂದ್ರಿಯಗಳಿಂದಾಚೆ ಯೋಚಿಸದ ಹೊರತು; 'ನಾನು ಯಾರು?' ಎಂದು ಅರಿವಾಗುವುದಿಲ್ಲ. 'ನಾನು ಯಾರು?' ಎಂದು ಅರಿವಾಗದ ಹೊರತು, 'ಸಾವು' ಅರ್ಥವಾಗುವುದಿಲ್ಲ. 'ನೀನು ಯಾರು?' ಎನ್ನುವ ಅರಿವು ನಿನಗಿದೆಯಾ?
Taarabhaayiya Patra
- Author Name:
M R Dattathri
- Book Type:

- Description:
ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ. ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
Tejo Tungabhadra: Tributaries of Time
- Author Name:
Maithreyi Karnoor +1
- Book Type:

- Description:
Tejo Tungabhadra narrates the story of two rivers on different continents whose souls are interconnected through history. On the banks of the river Tejo in Lisbon, Bella, a young Jewish refugee, and her family face daily threats to their lives and dignity from a deeply antisemitic society. Gabriel, her lover, sails to India with General Albuquerque's fleet, seeking wealth and a secure future. Meanwhile, on the banks of the Tungabhadra in the Vijayanagara Empire, the young couple Hampamma and Keshava find themselves caught in a storm of religious violence and the harsh cycle of tradition. The two stories come together in Goa with the power and energy of meeting rivers. Set in the late 15th and early 16th centuries, Tejo Tungabhadra is a grand saga of love, ambition, greed, and a lively passion for life amid the turbulent waves of history.
Hena Horuvavana Vrutthantha
- Author Name:
Cyrus Mistry +1
- Book Type:

- Description:
ಮೂಲ ಲೇಖಕರು : ಸೈರಸ್ ಮಿಸ್ತ್ರಿ ಕನ್ನಡಕ್ಕೆ : ಬಿ.ಆರ್.ಜಯರಾಮರಾಜೇ ಅರಸ್ ನಾಟಕ, ಪತ್ರಿಕೋದ್ಯಮ ಕ್ಷೇತ್ರದ ನಂಟಿನ ಜೊತೆಗೆ ಸಣ್ಣ ಕತೆಗಾರನಾಗಿ ವ್ಯಾಪಕ ಸಾಹಿತ್ಯ ಕೃಷಿ ಮಾಡಿರುವ ಸೈರಸ್ ಮಿಸ್ತ್ರಿ ಅವರ ‘ಕ್ರಾನಿಕಲ್ ಆಫ್ ಎ ಕಾರ್ಪ್ಸ್ ಬೇರರ್’ ಇಂಗ್ಲಿಷ್ ಕಾದಂಬರಿಯ ಅನುವಾದ ಈ ಹೊತ್ತಿಗೆ. 2013ನೇ ಸಾಲಿನಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯನ್ನು ಬಿ.ಆರ್.ಜಯರಾಮರಾಜೇ ಅರಸ್ ಅನುವಾದಿಸಿದ್ದಾರೆ. ಕಾದಂಬರಿಯ ಪುಟ ತಿರುವಿದಂತೆ ಕಥೆಯು ಬಾಂಬೆಯಲ್ಲಿ 1942ನೇ ಇಸವಿಯ ವರ್ತಮಾನ ಕಾಲದಿಂದ ಆರಂಭವಾಗಿ ಭೂತಕಾಲದಲ್ಲಿ ಸಾಗುತ್ತಾ ಅಪೂರ್ಣ ಭವಿಷ್ಯ ಬಿಚ್ಚಿಕೊಳ್ಳುತ್ತಾ ಮುನ್ನಡೆದಿದೆ. ಇಲ್ಲಿ ‘ಎಲ್ಚಿ’ (ಫಿರೋಜ್ ಎಲ್ಚಿದಾನ) ಕಥಾನಾಯಕ. ಪಾರ್ಸಿ ಉಪಜಾತಿಗೆ ಸೇರಿದ ಅಸ್ಪೃಶ್ಯರಾದ ಹೆಣಹೊರುವವರ ಬದುಕಿನ ವೃತ್ತಾಂತ ಇಲ್ಲಿದೆ. ಫಿರೋಜ್ ಸಮಾಜದ ಪ್ರಬಲ ವರ್ಗಕ್ಕೆ ಸೇರಿದ ಪುರೋಹಿತರೊಬ್ಬನ ಮಗ. ‘ಖಾಂಧಿಯಾ’ (ಹೆಣ ಹೊರುವವರು) ಜಾತಿಗೆ ಸೇರಿದ ಸೆಪಿಡೆಹ್ (ಸೆಪ್ಪಿ) ಎಂಬುವವಳನ್ನು ಪ್ರೀತಿಸುತ್ತಾನೆ. ಮಗಳನ್ನು ಮದುವೆಯಾಗಬೇಕಾದರೆ ಹೆಣ ಹೊರುವ ವೃತ್ತಿ ಸ್ವೀಕರಿಸಿ, ತಮ್ಮ ಜೊತೆಯೇ ಬದುಕಬೇಕು ಎನ್ನುವ ಸೆಪ್ಪಿ ತಂದೆಯ ಷರತ್ತಿಗೆ ಒಪ್ಪಿ ಆಕೆಯನ್ನು ಮದುವೆಯಾಗುತ್ತಾನೆ. ಇದಕ್ಕಾಗಿ ತಂದೆ, ತಾಯಿ, ಸಮುದಾಯವನ್ನೂ ತೊರೆದು ಬರುತ್ತಾನೆ. ಮಗಳ ಜನನದ ಸಂದರ್ಭದಲ್ಲಿ ಸೆಪ್ಪಿ ನಿಧನ, ಎಲ್ಚಿ ಬದುಕಿಗೆ ತಿರುವಾಗುತ್ತದೆ. ಆತ, ಈ ನೋವಿನಲ್ಲೂ, ತುಳಿತಕ್ಕೊಳಗಾಗುತ್ತಿರುವ ಖಾಂಧಿಯಾ ಜನರ ಬದುಕಿನಲ್ಲಿ ಬದಲಾವಣೆ ತರುವತ್ತ ಪಾರ್ಸಿ ಪಂಚಾಯತ್ ವಿರುದ್ಧ ದಂಗೆಯನ್ನೂ ಆರಂಭಿಸುತ್ತಾನೆ. ದ್ವಿತೀಯಾರ್ಧದಲ್ಲಿ ಕಥೆಯ ಈ ನಿರೂಪಣೆ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳಿಗೆ ಸಮಾನಾಂತರವಾಗಿ ಸಾಗುತ್ತದೆ. ಉಸಿರು ಬಿಗಿಹಿಡಿದು ಕಥೆಯನ್ನು ಓದುವಂತೆ ಪ್ರೇರೇಪಿಸುತ್ತದೆ. ಪಾರ್ಸಿ ಸಂಸ್ಕೃತಿಯು ಕೃತಿಯುದ್ದಕ್ಕೂ ಉಸಿರಾಡಿದೆ. ಕನ್ನಡ ಸಾಹಿತ್ಯಕ್ಕೆ ಹೊಸತನ್ನು ಸೇರಿಸುವಲ್ಲಿ ಈ ಕೃತಿ ಯಶಸ್ವಿಯಾಗಿದೆ.
Uttara
- Author Name:
Supreeth K N
- Book Type:

- Description:
Novel based on seeking answers for fundamental question. ಉತ್ತರ’ ಸುಪ್ರೀತ್ ಕೆ.ಎನ್ ಅವರ ಕಾದಂಬರಿ. ಕನ್ನಡದ ಭರವಸೆಯ ಕಾದಂಬರಿಕಾರರಲ್ಲಿ ಒಬ್ಬರಾದ ಸುಪ್ರೀತ್ ತಮ್ಮ ಪ್ರತಿ ಕೃತಿಯನ್ನೂ ಅಧ್ಯಾತ್ಮದ ಅಡಿಪಾಯದಲ್ಲೇ ರಚಿಸಿದರೂ, ಪ್ರತಿ ಕೃತಿಯಲ್ಲೂ ಅಧ್ಯಾತ್ಮದ ಬೇರೆ ಬೇರೆ ಆಯಾಮಗಳನ್ನು ಪರಿಚಯಿಸುತ್ತಾರೆ. ಈ ‘ಉತ್ತರ’ ಕಾದಂಬರಿಯ ಮೂಲ ವಸ್ತು 'ನೋವು'. ಕಥನಾಯಕ ಸ್ಕಂದ ನೋವಿನ ಪರಿಸ್ಥಿತಿಯೊಂದರಲ್ಲಿ ಸಿಲುಕಿದಾಗ, ಮನುಷ್ಯನಿಗೆ ನೋವು ಯಾಕೆ ಕಾಡುತ್ತದೆ? ನೋವಿನ ಮೂಲವೇನು? ನಮ್ಮನ್ನು ಕಾಡುವ ನೋವಿನಿಂದ ಹೇಗೆ ಹೊರಬರಬೇಕು? ಎನ್ನುವಂತಹ ಮೂಲಭೂತ ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರ ಹುಡುಕುತ್ತಾ ಆಶ್ರಮವೊಂದಕ್ಕೆ ತೆರಳಿ ಅಲ್ಲಿ ಅಧ್ಯಾತ್ಮ ಸಾಧನೆಗಳನ್ನು ಮಾಡುತ್ತಾ ತನ್ನ ನೋವಿನ ಮೂಲ ಹುಡುಕುತ್ತಾನೆ. ಉತ್ತರ ಹುಡುಕುವ ಈ ಹಾದಿಯಲ್ಲಿ ಕರ್ಮ ಸಿದ್ಧಾಂತಗಳ ಹಲವು ಮಜಲುಗಳ ಪರಿಚಯವು ಆಗುತ್ತದೆ.
Antariya ondu dina
- Author Name:
Prabha Sudhagade
- Book Type:

- Description:
ನಿಮಗೆ ಯಾವಾಗಲಾದರೂ ನಿಮ್ಮ ದಿನಚರಿ ಬೇಸರವಾಗಿದೆಯಾ? ಇಲ್ಲೊಬ್ಬಳು ಅಂತರಿ ಎನ್ನುವ ಇರುವೆಗೆ ಕೂಡ ದಿನಚರಿ ಬೇಸರವಾಗಿದೆ. ಆಗ ಅಂತರಿ ಏನು ಸಾಹಸ ಮಾಡಿದಳು ಎಂದು ತಿಳಿದುಕೊಳ್ಳಲು ಕಥೆ ಓದಿ. ಈ ಸುಂದರ ಕಥೆಯಲ್ಲಿ ಬರಿ ಅಂತರಿಯ ಸಾಹಸವಷ್ಟೇ ಅಲ್ಲದೆ ಅದರ ಜೊತೆಗೆ ವಿವಿಧ ಕೀಟಗಳ ಗೂಡುಗಳನ್ನು ಕೂಡ ಪರಿಚಯಿಸಲಾಗಿದೆ. With its blend of adventure and learning, it’s a perfect read for young minds—and an excellent addition to any school classroom or library!
Kannadada Muvattu Kathegalu
- Author Name:
Krishnamurthy Hanur +1
- Book Type:

- Description:
ಸಾಹಿತ್ಯ ಅಕಾದೆಮಿಯ ಪ್ರಧಾನ ಉದ್ದೇಶದಂತೆ ಇತರ ಭಾರತೀಯ ಭಾಷೆಗಳಿಗೆ ಅನುವಾದಗೊಳ್ಳಲು ಒಂದು ಪ್ರಾತಿನಿಧಿಕ ಕಥಾ ಸಂಕಲನವನ್ನು ಸಂಪಾದಿಸಿಕೊಡುವಂತೆ 2008ರಲ್ಲಿ ಅಕಾದೆಮಿಯ ಕನ್ನಡ ಸಲಹಾ ಸಮಿತಿ ಲೇಖಕರಾದ ಶ್ರೀ ಫಕೀರ್ ಮಹಮದ್ ಕಟ್ಟಾಡಿ ಹಾಗೂ ಡಾ.ಕೃಷ್ಣಮೂರ್ತಿ ಹನೂರು ಅವರನ್ನು ಕೇಳಿಕೊಂಡಿತು. ಅದಕ್ಕನುಗುಣವಾಗಿ ಆಧುನಿಕ ಕನ್ನಡ ಕಥಾಲೋಕದ ಹಿರಿಯ ಚೇತನ ಮಾಸ್ತಿಯವರಿಂದ ಮೊದಲುಗೊಂಡು ವಿವಿಧ ಮನೋಧರ್ಮಗಳಿಗೆ ಸೇರಿದಂತಹ ಮೂವತ್ತು ಕಥೆಗಾರರ ಕಥೆಗಳನ್ನು ಸಂಪಾದಕರು ಇಲ್ಲಿ ಕೊಟ್ಟಿದ್ದಾರೆ. ಕಳೆದೊಂದು ಶತಮಾನದಲ್ಲಿ ಕನ್ನಡ ಕಥಾ ಜಗತ್ತು ತೆರೆದುಕೊಂಡ ಪ್ರಕ್ರಿಯೆ, ಅದರ ವೈವಿಧ್ಯತೆ ಹಾಗೂ ಅನಾವರಣಗೊಂಡ ರೀತಿಯನ್ನು ಸಮರ್ಥವಾಗಿ ಪ್ರತಿಪಾದಿಸುವ ಕಥೆಗಳು ಈ ಸಂಕಲನದಲ್ಲಿವೆ. ಶ್ರೀ ಫಕೀರ್ ಮಹಮದ್ ಕಟ್ಟಾಡಿ ಹಾಗೂ ಡಾ.ಕೃಷ್ಣಮೂರ್ತಿ ಹನೂರು ಇಬ್ಬರೂ ವಿಶಿಷ್ಟ ಕಥೆಗಾರರಾಗಿ ಪ್ರಸಿದ್ದರು ಹಾಗೂ ಕಾದಂಬರಿ, ವಿಮರ್ಶೆ ಇನ್ನಿತರ ಸಾಹಿತ್ಯ ಪ್ರಕಾರಗಳಲ್ಲೂ ಗಣನೀಯ ಕೊಡುಗೆಗಳನ್ನು ನೀಡಿರುವ ಲೇಖಕರಾಗಿ ಜನಪ್ರಿಯರಾಗಿದ್ದಾರೆ.
Naticharaami
- Author Name:
Santoshkumar Mehandale
- Book Type:

- Description:
ಸ್ವತಃ ಲೇಖಕರೇ ಬರೆದು ಸಂಪಾದಿಸಿದ ಶಾಟ್ ಕಥೆಗಳು ಮತ್ತು ವೈಶಿಷ್ಟ್ಯಗಳ ಸಂಗ್ರಹ
Customer Reviews
Be the first to write a review...
0 out of 5
Book